Ode to the west wind

Join Us on WhatsApp

Connect Here

Written by 3:24 pm NEWS

ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಜನ ಸಾವು.!

ಉತ್ತರಕನ್ನಡ: ದಾಂಡೇಲಿಯಲ್ಲಿ ನೀರು ಪಾಲಾದ ಒಂದೇ ಕುಟುಂಬದ ಆರು ಜನ!

ನೀರಿನಲ್ಲಿ ಮುಳುಗಿ ಆರು ಪ್ರವಾಸಿಗರು ( tourist) ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಕಾಳಿ ನದಿಯಲ್ಲಿ ನಡೆದಿದೆ.

ಮೃತರು ಹುಬ್ಬಳ್ಳಿಯ( Hubballi) ಈಶ್ವರ ನಗರದ ನಿವಾಸಿಗಳಾದ ನಜೀರ್ ಅಹ್ಮದ್ (40),ಅಲ್ಛೀಯಾ ಅಹ್ಮದ್ (10),ಮೋಹಿನ್ ಅಹ್ಮದ್ (6),ರೇಷಾ ಉನ್ನಿಸಾ (38),ಇಫ್ರಾ‌ಅಹ್ಮದ್ (15),ಅಬೀದ್ ಅಹ್ಮದ್ (12). ದಡದಲ್ಲಿದ್ದ ಇಬ್ಬರು ಸುರಕ್ಷಿತರಾಗಿದ್ದಾರೆ.

ಮೃತರು ಒಂದೇ ಕುಟುಂಬದವರಾಗಿದ್ದು ಎಂಟು ಜನರು ವಾಹನ ಮಾಡಿಕೊಂಡು ದಾಂಡೇಲಿ(Dandeli) ಭಾಗಕ್ಕೆ ಪ್ರವಾಸ ಬಂದಿದ್ದರು. ಈಜುವ ವೇಳೆ ಮುಳಿಗಿದ್ದು ಸಾವು ಕಂಡಿದ್ದಾರೆ.

ದಾಂಡೇಲಿ ಪೊಲೀಸರು ಆರು ಜನರ ದೇಹಗಳನ್ನ ಹೊರತೆಗೆದಿದ್ದಾರೆ.ದೇಹಗಳನ್ನ ದಾಂಡೇಲಿ ಆಸ್ಪತ್ರೆಗೆ ರವಾನಿಸಿದ್ದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ‌

ಘಟನೆ ಸಂಬಂಧ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Visited 1 times, 1 visit(s) today
[mc4wp_form id="5878"]