ಆಗುಂಬೆಯೊಡಲಿನ ಜೋಗಿಗುಂಡಿ, ಎಚ್ವರ ತಪ್ಪಿದರೆ ಸಾವಿನಗುಂಡಿ.!

ಶಿವಮೊಗ್ಗದಲ್ಲಿ ಮಳೆ ಆರ್ಭಟ ಹೆಚ್ಚಿದೆ. ಕಾಡು-ಮೇಡು, ಗಿರಿ-ಶಿಖರಗಳೆಲ್ಲಾ ಜಲಧಾರೆಯಿಂದ ಬಸಿಯುತ್ತಿವೆ. ಜಲಾಶಯಗಳು ತುಂಬುವ ಆಶಾಭಾವನೆ ಮೂಡಿಸಿದೆ. ಹವಾಮಾನ ಇಲಾಖೆ ಇನ್ನೂ ಎರಡು ದಿನ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ. ಪ್ರವಾಸಿಗರೂ ಸಹ ನಿರೀಕ್ಷೆಗೂ ಮೀರಿ ಜಿಲ್ಲೆಯ ನಾನಾ ಪ್ರವಾಸಿತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ನಿಷೇಧಿತ ಅರಣ್ಯ ಪ್ರದೇಶದೊಳಗಿನ ಜಲಪಾತಗಳನ್ನ ಹುಡುಕಿ ಹುಚ್ಚಾಟ ಮಾಡುತ್ತಿದ್ದಾರೆ. ಪಶ್ಚಿಮ ಘಟ್ಟ ಸಾಲಿನ ಸುಂದರ ಊರು ಆಗುಂಬೆ. ಮಳೆ ಕಾಡಿನ ಸುಂದರ ಪರಿಸರದಲ್ಲಿ ಮಳೆಗೆ ಹತ್ತಾರು ಜಲಪಾತಗಳು ಗೋಚರವಾಗುತ್ತವೆ. ಗೋಂಡಾರಣ್ಯದ ಮಧ್ಯೆ ಇರುವ […]
ಕೌಲುದುರ್ಗ (ಕವಿಲೇದುರ್ಗ) ಎಂಬ ಅಭೇದ್ಯ ಕೋಟೆ:

ನಮ್ಮ ಭಾರತದಲ್ಲಿ ಸಾವಿರಾರು ಕೋಟೆಗಳನ್ನು ನಾವು ಕಾಣಬಹುದು. ಅವುಗಳಲ್ಲಿ ಕೆಲವು ಮಾತ್ರ ಐತಿಹಾಸಿಕವಾಗಿದ್ದು ಅಲ್ಲಿ ಈ ಹಿಂದೆ ಘಟಿಸಿದ ಘಟನೆಗಳಿಂದ ಇತಿಹಾಸದ ಪುಟಗಳಲ್ಲಿ ಮತ್ತು ಜನರ ಮನಸ್ಸಿನಲ್ಲಿ ಇವುಗಳ ಹೆಸರು ಶಾಶ್ವತವಾಗಿ ಅಚ್ಚು ಹೊಡೆದಂತೆ ಉಳಿದಿದೆ. ಇನ್ನೂ ಈ ಕೋಟೆಗಳ ಹೆಸರು ಸಹ ಅರ್ಥ ಪೂರ್ಣವಾಗಿರುತ್ತದೆ. ಕೆಲವು ಆ ಸ್ಥಳದ ಹೆಸರಿನ ಜೊತೆಗೆ ಮೆಲುಕು ಹಾಕಿಕೊಂಡರೆ ಇನ್ನು ಕೆಲವು ಆ ನೆಲದ ಶ್ರೇಷ್ಠ ವ್ಯಕ್ತಿಗಳ ಹೆಸರನ್ನು ಸೂಚಿಸುತ್ತದೆ. ಆದರೆ ನಮ್ಮ ಮಲೆನಾಡಿನ ಒಂದು ಕೋಟೆಗೆ ಈ ನೆಲದ […]
ಆನೆ ಕರೆಸಿ ಚಿರತೆ ಓಡಿಸ್ತೀನಿ, ಅರಣ್ಯ ಸಚಿವರ ಪತ್ರಿಕಾಗೋಷ್ಠಿಯಲ್ಲಿ ವಿನೋದ..!

ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿಂದ ಅರ್ಜುನಾ ಹಾಗೂ ಆಲೆ ಎಂಬ ಎರಡು ಆನೆಗಳು ಅರಣ್ಯ ಸಚಿವ ಉಮೇಶ ಕತ್ತಿ ಆದೇಶದ ಮೇರೆಗೆ ಬೆಳಗಾವಿಯಲ್ಲಿ ಚಿರತೆ ಬೆನ್ನಟ್ಟಲು ತೆರಳಿವೆ. ಬೆಳಗಾವಿಯಲ್ಲಿ ಸೋಮವಾರ ಅರಣ್ಯ ಇಲಾಖೆ ಸಭಾಂಗಣದಲ್ಲಿ ಪೊಲೀಸ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸಭೆ ನಡೆಸಿ ಬಳಿಕ ಅರಣ್ಯ ಸಚಿವ ಕತ್ತಿ ಮಾತನಾಡಿ, ಚಿರತೆ ಸಮಸ್ಯೆ ಬಗ್ಗೆ ಪತ್ರಕರ್ತರೊಂದಿಗೆ ವಿನೋದದಿಂದ ಮಾತನಾಡಿದರು.ಕಳೆದ 20 ದಿನಗಳಿಂದ ಬೆಳಗಾವಿ ಜಿಲ್ಲೆಯ ನಾಲ್ಕು ಕಡೆ ಚಿರೆತೆ ಹಾವಳಿ ಕಂಡು ಬಂದಿತ್ತು. ಚಿಕ್ಕೋಡಿಯಲ್ಲಿ ಭಾಗದಲ್ಲಿ ಕಂಡು […]
ಕೊಡಚಾದ್ರಿ ಬುಡದಲ್ಲೊಂದು ಮನಮೋಹಕ ಜಲಪಾತ..!

ಶಿವಮೊಗ್ಗದಲ್ಲಿ ಪ್ರಕೃತಿ ಪ್ರಿಯರಿಗೆ ಮುದ ನೀಡುವ ಸಾಕಷ್ಟು ಸ್ಥಳಗಳಿವೆ. ಇಂದಿಗೂ ಪ್ರವಾಸಿಗರ ಉಪಟಳದಿಂದ ದೂರನೇ ಉಳಿದಿವೆ. ಈಗೆಲ್ಲಾ ಪ್ರವಾಸಿಗರ ಅಭಿರುಚಿ ಬದಲಾದ್ದರಿಂದ ಹಾಗೂ ಪ್ರವಾಸಿತಾಣಗಳನ್ನ ವಿಕೃತಗೊಳಿಸುವ ಮನಸ್ಥಿತಿ ಹೊಂದಿರೋದ್ರಿಂದ ಅವುಗಳು ಹೀಗೆ ಇದ್ದರೇ ಒಳಿತು ಅನಿಸುತ್ತೆ.’ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಮಲೆನಾಡು ಪರಿಸರಕ್ಕೆ ಉತ್ತಮ ಉದಾಹರಣೆ. ಈ ತಾಲೂಕಿನಲ್ಲಿ ಸಿಗುವ ಪ್ರಾಕೃತಿಕ ಸೊಬಗು ಬೇರೆಡೆ ಸಿಗೋದಿಲ್ಲ. ತೀರ್ಥಹಳ್ಳಿ ಹಾಗೂ ಸ್ವಲ್ಪ ಮಟ್ಟಿನ ಸಾಗರವೂ ಸಹ ಮಲೆನಾಡಿನ ಪ್ರಾಕೃತಿಕ ಸೊಬಗನ್ನೇ ಹೊಂದಿದ್ದರೂ ಸಹ ಹೊಸನಗರ ಘಟ್ಟ ಪ್ರದೇಶ..! […]