ಕಸ್ತೂರಿ ರಂಗನ್ ವರದಿ ಕುರಿತು ಬಾಧ್ಯಸ್ಥರ ಸಭೆ Eco-Sensitive Areas: State Seeks Relief Package

ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ. ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆಗಸ್ಟ್ 2ರಂದು 6ನೇ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ ಈ ಮಾಸಾಂತ್ಯದೊಳಗೆ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿದೆ. ಈ ಹಿನ್ನೆಲೆ 11 ಜಿಲ್ಲೆಗಳ […]