ತುಂಗಾ ತೀರದಲ್ಲಿದಿದೆ ಸಂಗೀತ ಗ್ರಾಮ, ಇಲ್ಲಿನ ಸಾಧನಕನಿಗೆ ಪದ್ಮಶ್ರೀ ಗೌರವ.

ಗಮಕ ಗಂಧರ್ವ ಹೊಸಹಳ್ಳಿಯ ಹೆಚ್ಆರ್ ಕೇಶವಮೂರ್ತಿಗೆ ೨೦೨೨ರ ಪದ್ಮಶ್ರೀ ಕಲಾವಿಭಾಗದಲ್ಲಿ ಸಂದಿದೆ. ಮಲೆನಾಡಿನ ತುಂಗಾ ಮಡಿಲಲ್ಲಿರುವ ಪುಟ್ಟ ಹಳ್ಳಿ ಈ ಗಾರುಡಿಗನಿಂದ ದೇಶದಲ್ಲೆ ಹೆಸರು ಮಾಡುವಂತಾಗಿದೆ. ಸುಮಾರು ೮೮ ವರ್ಷ ಇಳಿವಯಸ್ಸಿನಲ್ಲೂ ಸಂಗೀತ ಸುಧೆ ಹರಿಸುವ ಕೇಶವಮೂರ್ತಿಗಳ ಸಾಧನೆಯನ್ನ ಇಡೀ ಜಿಲ್ಲೆ ಕೊಂಡಾಡಿದೆ. ಶಿವಮೊಗ್ಗದ ಮತ್ತೂರು-ಹೊಸಹಳ್ಳಿ ಅವಳಿ ಗ್ರಾಮಗಳು ಸಂಗೀತ ಪರಂಪರೆ, ವೇದ-ಶಾಸ್ತ್ರ ಅಧ್ಯಯನಗಳಿಗೆ ತನ್ನದೇ ಆದ ಕೊಡುಗೆಗಳನ್ನ ನೀಡಿವೆ. ಮತ್ತೂರು ಸಂಸ್ಕೃತ ಗ್ರಾಮ ಎಂದು ಎಲ್ಲರಿಗೂ ತಿಳಿದಿದೆ ಆದರೆ ಹೊಸಹಳ್ಳಿ ಗಮಕ ಗ್ರಾಮ ಎಂಬುದು ಗೊತ್ತಿಲ್ಲ. […]
ಗಾಳಕ್ಕೆ ಸಿಕ್ಕ ಮೊಸಳೆ, ತುಂಗಾ ನದಿ ಮೇಲಿನ ದೌರ್ಜನ್ಯದ ಕಥೆ ಹೇಳುತ್ತಿದೆ.

ಶಿವಮೊಗ್ಗದಲ್ಲಿ ಹರಿವ ಅವಳಿ ನದಿಗಳಾದ ತುಂಗಾ ಹಾಗೂ ಭದ್ರಾ ಕೂಡ್ಲಿಯಲ್ಲಿ ಸಂಗಮವಾಗಿ ತುಂಗಾ ಭದ್ರಾ ನದಿಯಾಗಿ ಹರಿದು ಸಾಗುತ್ತವೆ. ಈ ನದಿ ಮಲೆನಾಡಿನಲ್ಲಿ ವಿಶಿಷ್ಟ ಜೀವಸಂಕುಲಕ್ಕೆ ಆಶ್ರಯ ನೀಡಿದೆ. ಖಗ-ಮೃಗ, ಜಲಚರಗಳಿಗೆ ಆವಾಸ ಸ್ಥಾನವಾಗಿವೆ. ಅಳಿವಿನಂಚಿಗೆ ಬಂದಿರುವ ಮೊಸಳೆಗಳಿಗೂ ಕೂಡ ಸಂತಾನೋತ್ಪತ್ತಿಗೆ ಪ್ರಾಶಸ್ತ್ಯವಾದ ಸ್ಥಳ ಎಂದು ಸಾಬೀತು ಮಾಡಿದೆ. ಈ ಭಾಗದ ಜನರಿಗೆ ಮೊದಲಿಂದಲೂ ಭದ್ರಾ ನದಿ ನೀರಿನಲ್ಲಿ ಮೊಸಳೆಗಳಿರುವ ಮಾಹಿತಿ ಇದೆ. ಹಾಗೂ ಭದ್ರಾ ನದಿಯಲ್ಲಿ ಆಗಾಗ ಮೊಸಳೆಗಳು ಕಾಣಿಸಿಕೊಳ್ಳುತ್ತವೆ ಆದರೆ ತುಂಗಾ ನದಿಯಲ್ಲಿ ಮೊಸಳೆಗಳಿವೆ […]